ಲೇಖನಗಳು |
|
|
ಕಣ್ಮರೆಯಾದ ಅಗ್ರಮಾನ್ಯ ಕಲಾವಿದ ಕೋಡಿ ಶಂಕರ ಗಾಣಿಗ ಶ್ರೀ. ಕ್ಷೇತ್ರ ಮಂದಾರ್ತಿ ಮೇಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ, ಮೇಳಕ್ಕೂ ಯಕ್ಷಗಾನ ಕಲೆಗೂ ಘನತೆಯನ್ನು ತಂದಿತ್ತು, ಯಕ್ಷಗಾನಕ್ಕೆ ಪ್ರಥಮ ರಾಷ್ಟ್ರ ಪ್ರಶಸ್ತಿ ಗಳಿಸಿಕೊಟ್ಟ ರಾಷ್ಟಪ್ರಶಸ್ತಿ ವಿಜೇತ ದಿ. ಹಾರಾಡಿ ರಾಮ ಗಾಣಿಗರ ಮುಂದಿನ ತಲೆಮಾರಿನವರಾಗಿ ದೀರ್ಘಕಾಲ ಮಂದಾರ್ತಿ ಮೇಳದಲ್ಲಿ ರಾಮಗಾಣಿಗರಿಂದ ತೆರವಾದ ಸ್ಥಾನವನ್ನು ಸಮರ್ಥವಾಗಿ ತುಂಬಿದ ಅದೇ ಕುಟುಂಬದ ಸದಸ್ಯ ಕೋಡಿ ಶಂಕರಗಾಣಿಗರು ಇನ್ನಿಲ್ಲವಾಗಿದ್ದಾರೆ. ಹಾರಾಡಿ ಹಾಗು ಮಟ್ಪಾಡಿ ತಿಟ್ಟುಗಳ ಎಲ್ಲ ಕಲಾವಿದರ ಒಡನಾಡಿಯಾದ ಇವರು ಜೋಡಾಟದಲೂ ಮೂರು ನಾಲ್ಕು ವೇಷ ಮಾಡಿ ತೀರ್ಪುಗಾರರಿಂದ ಸೈ ಎಣಿಸಿಕೊಂಡವರು. ( ಪ್ರೋ.ಎಸ್.ವಿ.ಉದಯ ಕುಮಾರ ಶೆಟ್ಟಿ ) | ಯಕ್ಷಗಾನ ಪ್ರಸಂಗ ಸಾಹಿತ್ಯ ಯಕ್ಷಗಾನ ಪ್ರಸಂಗಗಳು ಪದ್ಯ ರೂಪದಲ್ಲಿರುವ ಕಥಾ ವಸ್ತುಗಳಾಗಿವೆ. ಯಕ್ಷಗಾನ ಅರ್ಥಗಾರಿಕೆಗೆ ಪ್ರಸಂಗಗಳು ಮೂಲ ಪಠ್ಯಗಳಾಗಿರುತ್ತವೆ. ಪ್ರಸಂಗವು ಪ್ರದರ್ಶನದ ಸಂವಿಧಾನವಾಗಿರುತ್ತದೆ. ಭಾಗವತರು ಮತ್ತು ಕಲಾವಿದರು ಪ್ರಸಂಗನಿಷ್ಠರಾಗಿ ಕಥಾವಸ್ತು ವನ್ನು ಮುಂದಕ್ಕೆ ಒಯ್ಯುತ್ತಾರೆ. ಯಕ್ಷಗಾನ ಪ್ರಸಂಗಗಳನ್ನು ವಸ್ತುವಿಗೆ ಅನುಗುಣವಾಗಿ ಪೌರಾಣಿಕ, ಐತಿಹಾಸಿಕ, ಜಾನಪದೀಯ ಮತ್ತು ಕಾಲ್ಪನಿಕ ಪ್ರಸಂಗಗಳೆಂದು ವಿಭಾಗಿಸಬಹುದು. ಭಾಷೆಗೆ ಅನುಗುಣ ವಾಗಿ ಕನ್ನಡ, ತುಳು, ಕೊಂಕಣಿ, ಮಲೆಯಾಳ, ಹಿಂದಿ ಮತ್ತು ಇಂಗ್ಲೀಷ್ ಯಕ್ಷಗಾನ ಪ್ರಸಂಗಗಳೆಂದು ವರ್ಗೀಕರಿಸಬಹುದು. ( ಪ್ರಭಾಕರ ಶಿಶಿಲ ) | ಟೆಂಟಲ್ಲಿ ಅರ್ಧಾಯುಷ್ಯ ಕಳೆದ ಹೆಮ್ಮೆಯ ಯಜಮಾನ : ಕಸ್ತೂರಿ ವರದರಾಯ ಪೈ ಬದುಕಿನ ಅರ್ಧ ಶತಮಾನಗಳನ್ನು ಚೌಕಿಯಲ್ಲಿ ಕಳೆದ ಪೈಗಳು ‘ಶ್ರೀ ಮಹಮ್ಮಾಯಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಸುರತ್ಕಲ್’ಮೇಳವನ್ನು, ವಿವಿಧ ಯಶಸ್ವೀ ಪ್ರಯೋಗಗಳಿ೦ದ ಮುನ್ನೆಡೆಸಿ, ಕಲಾವಿದರ ಪ್ರೀತಿ ಪಾತ್ರರಾದ ಯಜಮಾನರಾಗಿದ್ದರು. ಅಭಿಮಾನಿಗಳನ್ನು ಅರ್ಹತೆಯ ಬಲದಿಂದ ಹೊಂದಿದ್ದ ಅವರು ಯಜಮಾನಿಕೆಗೂ ‘ಅರ್ಹತೆಯಿದೆ’ ಮತ್ತು ‘ಅರ್ಹತೆ ಬೇಕು’ ಎಂದು ಅನುಷ್ಠಾನಿಸಿ ತೋರಿಸಿ ಕೊಟ್ಟವರು. ತೊಂಬತ್ತೊಂದು ವರ್ಷಗಳ ತುಂಬು ಜೀವನವನ್ನು ಅನುಭವಿಸಿದ ವರದರಾಯ ಪೈಗಳು 2016 ಜುಲೈ 17ರಂದು ದೈವಾಧೀನರಾದರು. ಅವರು ತಮ್ಮ ಅರ್ಧಾಯುಷ್ಯವನ್ನು ಚೌಕಿಯಲ್ಲೇ ಕಳೆದಿದ್ದರು! ( ನಾ.ಕಾರ೦ತ, ಪೆರಾಜೆ ) | ರಾಜಾಂಗಣದಲ್ಲಿ ರಂಜಿಸಿದ ಧಾರೇಶ್ವರ ಯಕ್ಷಬಳಗದವರ ಶ್ರೀ ಕೃಷ್ಣ ಅಷ್ಟಾಹ ಪರ್ಯಾಯ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಬಡಗುತಿಟ್ಟಿನ ಹಿರಿಯ ಭಾಗವತ ಧಾರೇಶ್ವರರ ಸಾರಥ್ಯದಲ್ಲಿ ಧಾರೇಶ್ವರ ಬಳಗದವರು ಎಂಟು ದಿನ ಉಡುಪಿ ರಾಜಾಂಗಣದಲ್ಲಿ ಪ್ರದರ್ಶಿಸಿದ ಶ್ರೀ ಕೃಷ್ಣನ ಬಾಲಲೀಲೆಯಿಂದ ಆರಂಬಿಸಿ ಪ್ರಭುದ್ದ ರಾಜಕಾರಿಣಿಯಾದ ಶ್ರೀಕೃಷ್ಣ, ಕೌರವ ಪಾಂಡವರ ನಡುವೆ ಸಂದಾನ ನಡುಸುವವರೆಗೆ ವಿವಿಧ ಪ್ರಸಂಗಗಳು ಹಲವಾರು ದಾಖಲಿಸುವ ಅಂಶಗಳೊಂದಿಗೆ ಸಹ್ರದಯ ಯಕ್ಷಗಾನಾಭಿಮಾನಿಗಳ ಮನತಣಿಸುವಲ್ಲಿ ಯಶಸ್ವಿಯಾಯಿತು. ಎಂಟು ದಿನ ಶ್ರೀ ಕೃಷ್ಣನ ಜನ್ಮ-ಬಾಲ್ಯ-ವಿವಾಹ-ಪ್ರಭುದ್ದತೆಯ ಮೇಲೆ ಬೆಳಕು ಚೆಲ್ಲುವ ಎಂಟು ಕಥಾನಕಗಳು ಇಂತಹ ಸಣ್ಣ ಪುಟ್ಟ ದೋಷಗಳ ಹೊರತಾಗಿಯೂ ಯಶಸ್ವಿ ಪ್ರಯೋಗ ಎನ್ನಬಹುದು. ಈ ನಿಟ್ಟಿನಲ್ಲಿ ಶ್ರೀ ದಾರೇಶ್ವರ ಯಕ್ಷ ಬಳಗದ ಸರ್ವ ಸದಸ್ಯರೂ ಅಭಿನಂದನಾರ್ಹರು. ( ಪ್ರೋ.ಎಸ್.ವಿ.ಉದಯ ಕುಮಾರ ಶೆಟ್ಟಿ ) | ಇತಿಹಾಸದ ಪುಟಕ್ಕೆ ಸಂದು ಹೋದ ಯಕ್ಷ ವಾಚಸ್ಮತಿ : ಸಿದ್ದಕಟ್ಟೆ ವಿಶ್ವನಾಥ ಶೆಟ್ಟಿ ತೆಂಕುತಿಟ್ಟು ಮತ್ತು ಬಡಗುತಿಟ್ಟು ರಂಗಸ್ಥಳವನ್ನು ತನ್ನ ವಾಕ್ಚಾತುರ್ಯದಿಂದ ಶ್ರೀಮಂತಗೊಳಿಸಿ ತಾಳ ಮದ್ದಳೆಯ ಕ್ಷೇತ್ರದಲ್ಲಿಯೂ ಬಹು ಬೇಡಿಕೆಯ ಕಲಾವಿದರಾಗಿ ಅಭಿಮಾನಿಗಳಿಂದ ಯಕ್ಷ ವಾಚಸ್ಮತಿ ಎಂಬ ಬಿರುದನ್ನು ಪಡೆದ ಹಿರಿಯ ಕಲಾವಿದ ಸಿದ್ದಕಟ್ಟೆ ವಿಶ್ವನಾಥ ಶೆಟ್ಟಿಯವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ 9. 15 ಕ್ಕೆ ನಿಧನ ಹೊಂದಿದರು. ಯಕ್ಷರಂಗಕ್ಕೆ ತೀವೃ ಆಘಾತ ತಂದ ಸುದ್ದಿ ಇದು. ಕಳೆದ ಐದು ತಿಂಗಳಿಂದ ಅನಾರೋಗ್ಯದಿಂದಿದ್ದ ಶೆಟ್ಟರ ನಿಧನ ಯಕ್ಷರಂಗಕ್ಕೆ ದೊಡ್ಡ ನಷ್ಟವನ್ನೇ ತಂದಿದೆ. ಸದಾ ನಗುಮೊಗದ, ಸರಳ, ನಿಗರ್ವಿ ವ್ಯಕ್ತಿತ್ವದ ಶೆಟ್ಟರು ಇನ್ನೀಗ ನೆನಪು ಮಾತ್ರವಾಗಿ ಇತಿಹಾಸದ ಪುಟಕ್ಕೆ ಸಂದು ಹೋದರು ಎಂದು ಬರೆಯುವುದೇ ವೇದನೆಯ ವಿಷಯ. ( ಎಂ. ಶಾಂತಾರಾಮ ಕುಡ್ವ ) | ತೆಂಕುತಿಟ್ಟಿನ ಪ್ರಖರ ಪ್ರತಿಭೆ ರಂಗವಿಹಾರಿ ಕಾಸರಗೋಡು ಸುಬ್ರಾಯ ಹೊಳ್ಳ ತೆಂಕುತಿಟ್ಟು ಯಕ್ಷಗಾನದ ರಂಗಸ್ಥಳದ ಮಿಂಚು, ಪ್ರಖರ ಪ್ರತಿಭೆಯ ರಂಗವಿಹಾರಿ ಕಾಸರಗೋಡು ಸುಬ್ರಾಯ ಹೊಳ್ಳರವರು ಪ್ರಸ್ತುತ ತೆಂಕುತಿಟ್ಟಿನ ಪಾರಂಪರಿಕ ಶೈಲಿಯ ಪ್ರಾತಿನಿಧಿಕ ವೇಷಧಾರಿ. ನಾಯಕ-ಪ್ರತಿನಾಯಕ ಪಾತ್ರಗಳೆರಡನ್ನೂ ಮೆಚ್ಚುವ, ಪ್ರೀತಿಸುವ ಇವರು ಪ್ರತಿನಾಯಕನಾಗಿಯೇ ಜನಪ್ರಿಯ. ಅಚ್ಚುಕಟ್ಟಾದ ವೇಷಗಾರಿಕೆ, ಪರಿಪೂರ್ಣವಾದ ಬಣ್ಣದ ಬರವಣಿಗೆ, ಯಕ್ಷಗಾನೀಯ ನಿಲುಮೆ-ರಂಗಚಲನೆ, ಆಕರ್ಷಕ ಶೈಲಿಯ ರಂಗಲಯ, ಶ್ರುತಿಬದ್ಧ ಮಾತುಗಾರಿಕೆ, ತರ್ಕಕ್ಕೆ ಬಿದ್ದರೆ ಸ್ಫೋಟಗೊಳ್ಳುವ ಪಾಂಡಿತ್ಯಭರಿತ ವಾಕ್ಪಟುತ್ವ ಸುಬ್ರಾಯ ಹೊಳ್ಳರನ್ನು ಕಲಾವಿದನಾಗಿ ಎತ್ತರಕ್ಕೇರಿಸಿವೆ. ( ಎಂ.ನಾ. ಚಂಬಲ್ತಿಮಾರ್ ) | ಇಡಗುಂಜಿ ಮೇಳಕ್ಕೆ ಕನ್ನಡ ಸಂಸ್ಕೃತಿ ಇಲಾಖೆಯಿಂದ ಧನಸಹಾಯ ನಿರಾಕರಣೆ ಕನ್ನಡ ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಇಂತಹ ಸರಕಾರದ ಸಂಸ್ಥೆಗಳೂ ಕೂಡ ನಮ್ಮ ನಾಡಿನ ಸಂಸ್ಕೃತಿಯನ್ನು ಉಳಿಸಿ ಮುಂದಿನ ಪೀಳಿಗೆಗೆ ದಾಟಿಸಿ ಬೆಳೆಸುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸುತ್ತಿರುವ ಇಂತಹ ಸಂಸ್ಥೆಗಳಿಗೆ ನೀಡುವ ಅಲ್ಪ ಸಹಾಯವನ್ನೂ ವಿಳಂಬಗೊಳಿಸಿದರೆ ಅಥವಾ ಪೂರ್ವಸೂಚನೆಯಿಲ್ಲದೆ ನಿಲ್ಲಿಸಿದರೆ ನಷ್ಟವಾಗುವುದು ಯಾರಿಗೆ ಎನ್ನುವ ಕುರಿತು ಚಿಂತಿಸಬೇಕಿದೆ. ಈ ಸಂಸ್ಥೆಗಳನ್ನು ಬಹಳ ಕಷ್ಟಪಟ್ಟು ನಡೆಸುತ್ತಿರುವುದು ಈ ನಮ್ಮ ಸಂಸ್ಕೃತಿಯ ಭಾಗವಾಗಿರುವ ಕಲೆಯನ್ನು ಮುಂದಿನ ಪೀಳಿಗೆಗೆ ದಾಟಿಸುವುದಕ್ಕಾಗಿ. ಯಕ್ಷಗಾನ ಕಲೆ ಉಳಿದು ಬೆಳೆಯಬೇಕಿದ್ದಲ್ಲಿ ಇಂತಹ ಸಂಸ್ಥೆಗಳು ಜೀವಂತವಾಗಿರಬೇಕು. ಇದಕ್ಕೆ ಸರಕಾರದ ಧನಸಹಾಯ ಅತೀ ಅವಶ್ಯ. ( ಕಟೀಲು ಸಿತ್ಲ ರಂಗನಾಥ ರಾವ್ ) | ಜಗಜ್ಯೋತಿ ಬಸವೇಶ್ವರ ಚರಿತೆ : ಯಕ್ಷಗಾನ ಪ್ರಸಂಗಗಳಿಗೆ ವಚನಗಳ ಬೆಸುಗೆ ನಗರದ ಡಿವಿಎಸ್ ಕಾಲೇಜಿನ ಸಂಸ್ಕೃತ ಪ್ರಾಧ್ಯಾಪಕ ವಿದ್ವಾನ್ ದತ್ತಮೂರ್ತಿ ಭಟ್ ಅವರು ಸಮಾನತೆಯ ಹರಿಕಾರ ಬಸವಣ್ಣನವರ ಜೀವನ ಚರಿತ್ರೆ, ವಚನ ಮಾಲಿಕೆ, ಬಸವತತ್ವ ಒಳಗೊಂಡ ವಿಚಾರಗಳನ್ನು ಯಕ್ಷಗಾನ ಪ್ರಸಂಗಕ್ಕೆ ಅಳವಡಿಸಿ, ನಾಡಿನ ಮೂಲೆ ಮೂಲೆಯಲ್ಲೂ ಪ್ರದರ್ಶನ ನೀಡಿದ್ದಾರೆ. ಎನ್ನುವಂತೆ ಮಲೆನಾಡು–ಕರಾವಳಿ ಭಾಗದ ಜನಪ್ರಿಯ ಯಕ್ಷಗಾನಕ್ಕೂ, ಉತ್ತರ ಕರ್ನಾಟಕದಲ್ಲಿ ಸಮಾನತೆಯ ಕಹಳೆ ಮೊಳೆಗಿಸಿದ 12ನೇ ಶತಮಾನದ ಕ್ರಾಂತಿಪುರುಷ ಬಸವಣ್ಣನ ವಚನ ಸಾಹಿತ್ಯಕ್ಕೂ ಎಲ್ಲಿಯ ಸಂಬಂಧ. ಆದರೂ, ಇಂತಹ ಸಂಬಂಧ ಬೆಸೆದವರು ನಗರದ ನಾಟ್ಯಶ್ರೀ ಕಲಾ ತಂಡದ ದತ್ತಮೂರ್ತಿ ಭಟ್. ( ಚಂದ್ರಹಾಸ ಹಿರೇಮಳಲಿ ) | ಕಲಾಸೇವೆಯ ರಜತ ವರ್ಷದ ಹೊಸ್ತಿಲಲ್ಲಿ ಬೇಡಿಕೆಯ ಕಲಾವಿದ : ಪೆರ್ಮುದೆ ಜಯಪ್ರಕಾಶ್ ಶೆಟ್ಟಿ ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಕಲಾವಿದರಲ್ಲಿ, ಭರವಸೆ ವೇಷಧಾರಿ ಹಾಗೂ ಅರ್ಥಧಾರಿ ಪೆರ್ಮುದೆ ಜಯಪ್ರಕಾಶ್ ಶೆಟ್ಟಿ ಒಬ್ಬರು. ಆಟ ಕೂಟಗಳೆರಡರಲ್ಲೂ ಸಲ್ಲುವ ಶ್ರೇಷ್ಟ ಕಲಾವಿದರು. ಯಕ್ಷರಂಗದಲ್ಲಿ ತನ್ನದೇ ಆದ ಛಾಪನ್ನು ಸೃಷ್ಟಿಸಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶೆಟ್ಟರು, ಕಿರಿಯ ಪ್ರಾಯದಲ್ಲೇ ಹಿರಿದನ್ನು ಸಾಧಿಸಿ, ಯಕ್ಷಗಾನ ದಿಗ್ಗಜ ಸಿದ್ದಕಟ್ಟೆ ದಿ| ಚೆನ್ನಪ್ಪ ಶೆಟ್ಟಿ ಅವರ ತಣ್ತೀ, ಆದರ್ಶಗಳನ್ನು ಪಾಲಿಸಿ, ಅದೇ ದಾರಿಯಲ್ಲಿ ನಡೆಯುತ್ತಿದ್ದು ಮುಂದೊಂದು ದಿನ ಅವರ ಸ್ಥಾನವನ್ನು ಸಮರ್ಥವಾಗಿ ತುಂಬುವಲ್ಲಿ ಯಶಸ್ವಿಯಾಗಲಿ ಎಂದು ಕಲಾಭಿಮಾನಿಗಳ ಹಾರೈಕೆ. ( ಸತೀಶ್ ನಾಯಕ್ , ಪಕಳಕು೦ಜ ) | ``ಗಾನ ಗಂಧರ್ವ`` ಪದ್ಯಾಣ ಗಣಪತಿ ಭಟ್ಟರಿಗೆ 60ರ ಸಂಭ್ರಮದ ಸನ್ಮಾನ ಸುಮಾರು 70ರ ದಶಕದಲ್ಲಿ ಯಕ್ಷಗಾನದ ಭವಿಷ್ಯದ ಬಗ್ಗೆ ಕಾಡುತ್ತಿದ್ದ ಚಿಂತನೆ ಪ್ರಸಕ್ತ ದಿನಗಳಲ್ಲೂ ಕಾಣಿಸುತ್ತಿದೆ. ಹೀಗಾಗಿ ಯಕ್ಷಗಾನದ ಮುಂದಿನ ಪರಂಪರೆಗೆ ಯಾರು ಎಂಬ ಬಗ್ಗೆ ನಮ್ಮೊಳಗೆ ಗಂಭೀರ ಚಿಂತನೆ ಮಾಡುವ ಆವಶ್ಯಕತೆ ಇದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಯಕ್ಷಗಾನದ ಹಿರಿಯ, ಪ್ರಸಿದ್ಧ ಭಾಗವತ ``ಗಾನ ಗಂಧರ್ವ`` ಪದ್ಯಾಣ ಗಣಪತಿ ಭಟ್ಟರಿಗೆ 60ರ ಸಂಭ್ರಮದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ (ಜೂ. 4, ಜೂ. 5) ಮಂಗಳೂರು ಪುರಭವನದಲ್ಲಿ ಆಯೋಜಿಸಲಾದ ದ್ವಿದಿನ ಕಲೋತ್ಸವದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ( ಉದಯವಾಣಿ ) | ಎಂ. ಎಲ್. ಸಾಮಗ ಮತ್ತು ಸಿದ್ಧಕಟ್ಟೆ ವಿಶ್ವನಾಥ ಶೆಟ್ಟಿಯವರಿಗೆ ಉಡುಪಿ ಯಕ್ಷಗಾನ ಕಲಾರಂಗ ಪ್ರಶಸ್ತಿ ಉಡುಪಿಯ ಯಕ್ಷಗಾನ ಕಲಾರಂಗವು ವರ್ಷ ಪೆರ್ಲ ಕೃಷ್ಣ ಭಟ್ ಪ್ರಶಸ್ತಿಯನ್ನು ಪ್ರೊ| ಎಂ. ಎಲ್. ಸಾಮಗರವರಿಗೆ 29-5-2016ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು , ಮಟ್ಟಿ ಮುರಲೀಧರ ರಾವ್ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿಯನ್ನು ಸಿದ್ಧಕಟ್ಟೆಗೆ ತೆರಳಿ ಅಜ್ಜಿಬೆಟ್ಟು ನಿವಾಸದಲ್ಲಿ ತೀವ್ರ ಅನಾರೋಗ್ಯದಿ೦ದ ಇದೀಗ ಚೇತರಿಸುತ್ತಿರುವ ಹಿರಿಯ ಕಲಾವಿದ ಸಿದ್ಧಕಟ್ಟೆ ವಿಶ್ವನಾಥ ಶೆಟ್ಟಿಯವರಿಗೆ ಪ್ರದಾನ ಮಾಡಲಾಯಿತು. ( ನಾರಾಯಣ ಎಂ. ಹೆಗಡೆ ) | ಯಕ್ಷಧ್ರುವ ಪಟ್ಲ ಪ್ರಶಸ್ತಿ ಪುರಸ್ಕೃತ, ಯಕ್ಷರಂಗದ ರಾಜ : ಪೆರುವಾಯಿ ನಾರಾಯಣ ಶೆಟ್ಟಿ ಯಕ್ಷಗಾನ ಕಲಾಕ್ಷೇತ್ರದಲ್ಲಿ ಮುಂಚೂಣಿಯ ಕಲಾವಿದರಾಗಿ ಐವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದವರು ಪೆರುವಾಯಿ ನಾರಾಯಣ ಶೆಟ್ಟಿ. ಜಾಬಾಲಿ, ಅರುಣಾಸುರ, ರಕ್ತಬೀಜ, ಕೌರವ, ಕರ್ಣ, ಅರ್ಜುನ, ಅತಿಕಾಯ, ಇಂದ್ರಜಿತು, ಕೋಟಿ ಚೆನ್ನಯದ ಕೋಟಿ ಮೊದಲಾದ ವೇಷಗಳ ನಿರ್ವಹಣೆಯಲ್ಲಿ ``ಪೆರುವಾಯಿ ಶೈಲಿ`` ಎಂಬ ಹೊಸ ಹಾದಿಯನ್ನು ನಿರ್ಮಿಸಿದ ಕೀರ್ತಿವಂತ. ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ``ಯಕ್ಷರಂಗದ ರಾಜ`` ಎನಿಸಿದ ಪೆರುವಾಯಿ ನಾರಾಯಣ ಶೆಟ್ಟಿಯವರು ಎಲ್ಲ ಬಗೆಯ ನಾಯಕ-ಪ್ರತಿನಾಯಕ ಪಾತ್ರಗಳೆರಡನ್ನೂ ಚೆನ್ನಾಗಿ ನಿರ್ವಹಿಸುತ್ತಾರೆ. ( ಎಲ್. ಎನ್. ಭಟ್ ಮಳಿಯ ) | ಕಲಾಭಿಮಾನಿಗಳ ಸಹಾಯದ ನಿರೀಕ್ಷೆಯಲ್ಲಿ ಬೆದ್ರಳ್ಳಿ ಚಂದ್ರ ಶೆಟ್ಟಿ ಬಡಗುತಿಟ್ಟಿನ ಪ್ರಸಿದ್ಧ ಹಾಸ್ಯಗಾರ, ಮಡಾಮಕ್ಕಿ ಮೇಳದ ಕಲಾವಿದ ಬೆದ್ರಳ್ಳಿ ಚಂದ್ರ ಶೆಟ್ಟಿ ಸಂಕಷ್ಟಕ್ಕೀಡಾಗಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ತನ್ನದೆ ಛಾಪು ಮೂಡಿಸಿದ್ದ ಅವರಿಗೆ ತೀವ್ರ ತೆರನಾದ ಅನಾರೋಗ್ಯ ರಂಗಸ್ಥಳದಿಂದ ವಿಮುಖಗೊಳಿಸಿದೆ. ಕಳೆದ 50 ವರ್ಷಗಳಿಂದ ರಂಗದಲ್ಲಿ ಕಸುವು ಮಾಡಿರುವ ಅವರೀಗ ಕಿಡ್ನಿ, ಹೃದಯ ಬೇನೆಯಿಂದ ಬಳಲುತ್ತಿದ್ದು ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಲಾಗದೆ ಕಷ್ಟಕ್ಕೆ ಸಿಲುಕಿದ್ದಾರೆ. ( ಜಾನ್ ಡಿಸೋಜ, ಕುಂದಾಪುರ ) |
ಅಚ್ಚುಕಟ್ಟಾಗಿ ಸ೦ಪನ್ನಗೊ೦ಡ ಯಕ್ಷಧ್ರುವ ಪಟ್ಲ ಸಂಭ್ರಮ - 2016 ( ಮೇ 24 , 2016 )
( )
|
|
|
ದಿನದ ಭಾವಚಿತ್ರ |
|
ಶೇಣಿ ಆತ್ಮಕಥನ |
ಯಕ್ಷಗಾನ ಪ್ರಪ೦ಚದ ಅನಭಿಷಿಕ್ತ ದೊರೆ, ಮಾತ್ರವಲ್ಲ ಯಕ್ಷಗಾನ ಕ್ಷೇತ್ರದಲ್ಲಿ ಬ೦ಡಾಯ ಪ್ರವೃತ್ತಿಯನ್ನು ಬೆಳೆಸಿ ಅರ್ಥಗಾರಿಕೆಗೆ ಹೊಸ ಆಯಾಮ ತ೦ದುಕೊಟ್ಟವರು. ತೆ೦ಕುತಿಟ್ಟು, ಬಡಗುತಿಟ್ಟುಗಳಿರುವ೦ತೆ ಅವರ ಮಾತುಗಾರಿಕೆಯನ್ನು "ಶೇಣಿ ತಿಟ್ಟು" ಎ೦ದರೂ ಸಲ್ಲುತ್ತದೆ! ಒಮ್ಮೆ ವೇದಿಕೆಯನ್ನೇರಿ ಕುಳಿತು ಮಾತಿಗೆ ತೊಡಗಿದರೆ೦ದರೆ ಪಾತ್ರದ ಒಳಹೊಕ್ಕು, ಅದರಲ್ಲಿ ತಲ್ಲೀನರಾಗಿ, ಕೂದಲೆಳೆಯನ್ನು ಸೀಳಿದ೦ತೆ ಸೂಕ್ಷ್ಮವಾಗಿ ಪಾತ್ರದ ಬಗೆಗೆ ತನ್ನ ವಾದವನ್ನು ಮ೦ಡಿಸಿ, ಎಲ್ಲರಿ೦ದಲೂ ಸೈ ಎನ್ನಿಸಿಕೊಳ್ಳುತ್ತಿದ್ದರು. ಅವರ ಅರ್ಥಗಾರಿಕೆ ಒ೦ದು ಮ್ಯಾಜಿಕ್ ಇದ್ದ೦ತೆ. ಪ್ರೇಕ್ಷಕರೆಲ್ಲರನ್ನೂ ಮ೦ತ್ರ ಮುಗ್ಧಗೊಳಿಸಿ ಏಕಕಾಲದಲ್ಲಿ ರ೦ಗವನ್ನು ಹಾಗೂ ಎಲ್ಲರ ಅ೦ತರ೦ಗಗಳನ್ನು ಗೆಲ್ಲುತ್ತಿದ್ದ ಅಸಾಮಾನ್ಯ ಪ್ರತಿಭಾವ೦ತ ಕಲಾವಿದ.
ಯುಗಪ್ರವರ್ತಕ ಶೇಣಿ ಗೋಪಾಲಕೃಷ್ಣ ಭಟ್ ರವರ ಆತ್ಮಕಥನ ``ಯಕ್ಷಗಾನ ಮತ್ತು ನಾನು``
|
|