ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಬಾಯಾರು ಶೇಖರ ಶೆಟ್ಟಿಯವರಿಗೆ ವಿಟ್ಲ ಜೋಶಿ ಪ್ರತಿಷ್ಠಾನದ ಪುರಸ್ಕಾರ

ಲೇಖಕರು : ಉದಯವಾಣಿ
ಶನಿವಾರ, ಜನವರಿ 9 , 2016
ಜನವರಿ 9, 2016

ಬಾಯಾರು ಶೇಖರ ಶೆಟ್ಟಿಯವರಿಗೆ ವಿಟ್ಲ ಜೋಶಿ ಪ್ರತಿಷ್ಠಾನದ ಪುರಸ್ಕಾರ

ವಿಟ್ಲ :
ವಿಟ್ಲ ಜೋಶಿ ಪ್ರತಿಷ್ಠಾನದಿಂದ ಕೊಡಲ್ಪಡುವ ಮೊದಲ ಶತಮಾನೋತ್ಸವ ಪುರಸ್ಕಾರಕ್ಕೆ ಶೇಖರ ಶೆಟ್ಟಿ ಬಾಯಾರು ಆಯ್ಕೆ ಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಜ. 10ರಂದು ಮುಳಿಗದ್ದೆಯ ಹೆದ್ದಾರಿ ಶಾಲಾ ವಠಾರದಲ್ಲಿ ನಡೆಯಲಿದೆ.

1965ರಲ್ಲಿ ಕಾಸರಗೋಡು ಜಿಲ್ಲೆಯ ಬಾಯಾರು ಗ್ರಾಮದ ಕುಳಾರು ಎಂಬಲ್ಲಿ ಪ್ರಸಿದ್ಧ ಸ್ತ್ರೀ ವೇಷಧಾರಿ ಐತಪ್ಪಶೆಟ್ಟಿ ಹಾಗೂ ಕಲ್ಯಾಣಿ ದಂಪತಿಯ ಪುತ್ರರಾಗಿ ಜನಿಸಿದ ಶೇಖರ ಶೆಟ್ಟಿಯವರು ವೃತ್ತಿಯಲ್ಲಿ ಶಿಕ್ಷಕನಾದರೂ ತಮ್ಮ ಬಿಡುವಿನ ಸಮಯವನ್ನು ಯಕ್ಷಶಿಕ್ಷಣಕ್ಕೆ ಮುಡಿಪಾಗಿರಿಸಿದ ಯಕ್ಷಗುರು. ಬಾಯಾರು ಪ್ರಕಾಶಚಂದ್ರ ರಾವ್‌ ಅವರಿಂದ ಯಕ್ಷಗಾನ ನಾಟ್ಯ ತರಬೇತಿ ಪಡೆದ ಇವರು ಪರಿಸರದ ಶಾಲೆ ಭಜನಾ ಮಂಡಳಿ ಹಾಗೂ ಕಲಾವೃಂದಗಳಲ್ಲಿ ಮಕ್ಕಳ ಯಕ್ಷಗಾನ ಪ್ರದರ್ಶನಗಳಿಗೆ ಪೂರಕವಾಗಿ ತರಬೇತಿ ನೀಡಿದ ಕಲಾಸಕ್ತರು.

ಯಕ್ಷಗಾನ ವೇಷಧಾರಿ, ಭಾಗವತರಾಗಿ, ಭಜನಾಕಾರರಾಗಿ, ನಾಟಕ ರಚನಾಕಾರರಾಗಿ ಹಾಗೂ ಜಾನಪದ ನೃತ್ಯ ತರಬೇತುದಾರರಾಗಿ ಇವರದು ಬಹುಮುಖ ಪ್ರತಿಭೆ.

ಕೃಪೆ : udayavani


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ