ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಯಕ್ಷಗಾನಕ್ಕೆ ಪ್ರತ್ಯೇಕ ಪ್ರಶಸ್ತಿ: ನಿರ್ಣಯ

ಲೇಖಕರು : ವಿಜಯ ಕರ್ನಾಟಕ
ಸೋಮವಾರ, ಜನವರಿ 18 , 2016
ಜನವರಿ 18, 2016

ಯಕ್ಷಗಾನಕ್ಕೆ ಪ್ರತ್ಯೇಕ ಪ್ರಶಸ್ತಿ: ನಿರ್ಣಯ

ಶಿವಮೊಗ್ಗ : ಕರ್ನಾಟಕ ಸಾಂಸ್ಕೃತಿಕ ಕಲಾ ಪ್ರತಿಷ್ಠಾನ ಹಾಗೂ ಜಿಲ್ಲೆಯ ಎಲ್ಲ ಯಕ್ಷಗಾನ ಕಲಾ ಪೋಷಕರ ಸಂಯುಕ್ತ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರಲ್ಲಿ ಏರ್ಪಡಿಸಿದ್ದ ಮೂರು ದಿನದ 11ನೇ ಅಖಿಲ ಭಾರತ ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನ ಭಾನುವಾರ ಸಂಜೆ ಮುಕ್ತಾಯಗೊಂಡಿತು.

ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಯಕ್ಷಗಾನ ಮಹತ್ವದ ಕಲೆಯಾಗಿರುವುದರಿಂದ ಇದರ ಬಗ್ಗೆ ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆಗೆ ಸಹಾಯವಾಗುವ ನಿಟ್ಟಿನಲ್ಲಿ ಪ್ರತ್ಯೇಕ ಯಕ್ಷಗಾನ ವಿಶ್ವವಿದ್ಯಾಲಯ ಆರಂಭಿಸಬೇಕು. ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿ ತರಗತಿವರೆಗೆ ಯಕ್ಷಗಾನದ ಆಯ್ದ ಪದ್ಯಗಳನ್ನು ಪಠ್ಯದಲ್ಲಿ ಅಳವಡಿಸಿ ಮಕ್ಕಳಲ್ಲಿ ಯಕ್ಷಗಾನದ ಅಭಿರುಚಿ ಬೆಳೆಯುವಂತೆ ಮಾಡುವುದು. ಯಕ್ಷಗಾನ ಹಾಗೂ ಬಯಲಾಟಕ್ಕಾಗಿಯೇ ಪ್ರತ್ಯೇಕ ಅಕಾಡೆಮಿ ಸ್ಥಾಪಿಸುವುದು. ಪೌರಾಣಿಕ ಯಕ್ಷಗಾನ ಪ್ರಸಂಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲವೊಂದು ವಿಕೃತಿಗಳು ನುಸುಳುತ್ತಿದ್ದು, ಅವುಗಳನ್ನು ನಿವಾರಿಸುವುದು.

ಯಕ್ಷಗಾನಕ್ಕೆ ಸಂಬಂಧಪಟ್ಟಂತೆ ಯಾವುದೇ ಕರಪತ್ರಗಳನ್ನು ಮುದ್ರಿಸಿದರೂ ಅದರಲ್ಲಿ ಪ್ರಸಂಗ ಕರ್ತರ ಹೆಸರನ್ನು ಮುದ್ರಿಸಬೇಕು. ದೇವಿಮಹಾತ್ಮೆ ಯಕ್ಷಗಾನ ಪ್ರಸಂಗ ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಪ್ರದರ್ಶನ ಕಂಡಿರುವುದರಿಂದ ಇದನ್ನು ರಾಷ್ಟ್ರೀಯ ದಾಖಲೆ ಎಂದು ಮಾನ್ಯ ಮಾಡಬೇಕು ಎಂದು ಸಮ್ಮೇಳನದಲ್ಲಿ ನಿರ್ಣಯಿಸಲಾಗಿದೆ.

ಪ್ರಸ್ತುತ ಬೇರೆ ಪ್ರಶಸ್ತಿಗಳೊಂದಿಗೆ ಸೇರಿಸಿ ಯಕ್ಷಗಾನಕ್ಕೂ ಪ್ರಶಸ್ತಿ ನೀಡಲಾಗುತ್ತಿದೆ. ಇದರ ಬದಲು ಯಕ್ಷಗಾನಕ್ಕೆ ಪ್ರತ್ಯೇಕವಾಗಿ ಪ್ರಶಸ್ತಿ ನೀಡಬೇಕು. ಯಕ್ಷಗಾನ ಪೌರಾಣಿಕ ಪ್ರಸಂಗಗಳ ಮರು ಮುದ್ರಣ ಮಾಡಬೇಕು. ಶಿವಮೊಗ್ಗದ ಕುವೆಂಪು ರಂಗಮಂದಿರವನ್ನು ರಾತ್ರಿ 12ರ ತನಕ ಯಕ್ಷಗಾನಕ್ಕೆ ನೀಡಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ.

ಸಮಾರೋಪ ಸಮಾರಂಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಎಸ್.ಎನ್.ಪರಾಜೆ, ಸಮ್ಮೇಳನಾಧ್ಯಕ್ಷ ಡಿ.ಎಸ್.ಶ್ರೀಧರ್, ಸಾಗರದ ಎಂ.ಆರ್. ಲಕ್ಷ್ಮೀನಾರಾಯಣ, ರಘುರಾಮ ದೇವಾಡಿಗ, ಭಾಸ್ಕರ್ ಬಾರ‌್ಯ, ಮಧುಸೂದನ್ ಐತಾಳ್, ಲಕ್ಷ್ಮೀನಾರಾಯಣ ಕಾಶಿ, ರವಿಶಂಕರ್ ಬಡೆಕ್ಕಿಲ, ವಿದ್ವಾನ್ ದತ್ತಮೂರ್ತಿ ಭಟ್ ಮತ್ತಿತರರು ಇದ್ದರು. ಡಾ.ಶುಭಾ ಮರವಂತೆ ಸ್ವಾಗತಿಸಿದರು. ಸಿ.ಪಾಂಡುರಂಗರಾವ್ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಯಕ್ಷಗಾನ ಸಾಧಕರನ್ನು ಸನ್ಮಾನಿಸಲಾಯಿತು. ನಂತರ ಬಡಗತಿಟ್ಟಿನ ಅಂಬಾ ಶಪಥ ಪ್ರಸಂಗ ಕುರಿತು ಮಹಿಳೆಯರು ಯಕ್ಷಗಾನ ಪ್ರದರ್ಶಿಸಿದರು.



ಕೃಪೆ : vijaykarnataka


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ