ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿ ಪ್ರಶಸ್ತಿ ಪ್ರದಾನ
ಲೇಖಕರು : ಉದಯವಾಣಿ
ಸೋಮವಾರ, ಫೆಬ್ರವರಿ 8 , 2016
|
ಫೆಬ್ರವರಿ 8, 2016
|
ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿ ಪ್ರಶಸ್ತಿ ಪ್ರದಾನ
ಉಡುಪಿ :
ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯ 58ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ರವಿವಾರ ಅಂಬಲಪಾಡಿ ದೇವಸ್ಥಾನದ ಆವರಣದಲ್ಲಿ ಜರಗಿತು.
ಕಿದಿಯೂರು ಆಚಾರ್ಯ ಪ್ರಶಸ್ತಿಯನ್ನು ಇಂದ್ರಾಳಿ ಪ್ರಭಾಕರ ಆಚಾರ್ಯ, ಕಪ್ಪೆಟ್ಟು ಬಾಬು ಶೆಟ್ಟಿಗಾರ್ ಪ್ರಶಸ್ತಿಯನ್ನು ರಾಧಾಕೃಷ್ಣ ನಾಯಕ್ ಹಾಗೂ ಕುತ್ಪಾಡಿ ಆನಂದ ಗಾಣಿಗ ಪ್ರಶಸ್ತಿಯನ್ನು ಪುಂಡರೀಕಾಕ್ಷ ಉಪಾಧ್ಯ ಅವರು ಸ್ವೀಕರಿಸಿದರು.
ಶ್ರೀ ಅಂಬಲಪಾಡಿ ದೇವಸ್ಥಾನನದ ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ಸದಸ್ಯ ಪಳ್ಳಿ ಕಿಶನ್ ಹೆಗ್ಡೆ, ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಣೇಶ್ ರಾವ್, ಹಟ್ಟಿಯಂಗಡಿ ಶ್ರೀ ಮರಲಾದೇವಿ ದೇವಸ್ಥಾನದ ಧರ್ಮದರ್ಶಿ ಮಂಜುನಾಥಯ್ಯ ಉಪಸ್ಥಿತರಿದ್ದರು.
ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿ ಅಧ್ಯಕ್ಷ ಮುರಲಿ ಕಡೆಕಾರ್ ಸ್ವಾಗತಿಸಿದರು. ಕಾರ್ಯದರ್ಶಿ ಕೆ.ಜೆ. ಕೃಷ್ಣ ವರದಿ ವಾಚಿಸಿದರು. ನಟರಾಜ ಉಪಾಧ್ಯ ಕಾರ್ಯಕ್ರಮ ನಿರ್ವಹಿಸಿದರು. ಮಂಜುನಾಥ ತೆಂಕಿಲ್ಲಾಯ ವಂದಿಸಿದರು.
ಕೃಪೆ :
udayavani
|
|
|