ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಯಕ್ಷಗಾನ ಕಲಾವಿದರಿಗೆ ಅವಮಾನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಬುಧವಾರ, ಜುಲೈ 6 , 2016
ಜುಲೈ 6 , 2016

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಯಕ್ಷಗಾನ ಕಲಾವಿದರಿಗೆ ಅವಮಾನ

ಬೆಂಗಳೂರು : ಬುಧವಾರ ನಡೆಯಬೇಕಿದ್ದ ಯಕ್ಷಗಾನ ವಿಚಾರ ಸಂಕಿರಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರದ್ದು ಮಾಡಿ ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡಿದೆ.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದಿನಿಂದ ಭಾನುವಾರದವರೆಗೆ ಜಾನಪದ ಯಕ್ಷಗಾನ ವಿಚಾರ ಸಂಕಿರಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿತ್ತು. ಆದರೆ ಮಂಗಳವಾರ ರಾತ್ರಿ ಇಲಾಖೆಯ ಅಧಿಕಾರಿಯೊಬ್ಬರು ಕರೆ ಮಾಡಿ ಬೇರೆ ದಿನ ಆಯೋಜನೆ ಮಾಡಿ ಎಂದು ಹೇಳಿ ಕಾರ್ಯಕ್ರಮವನ್ನು ರದ್ದು ಮಾಡಿ ಎಂದು ತಿಳಿಸಿದ್ದಾರೆ.

ಎಂಬತ್ತು ವರ್ಷದ ಹಿರಿಯ ಯಕ್ಷಗಾನ ಕಲಾವಿದರಾದ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ, ರಾಜ್ಯ ಪ್ರಶಸ್ತಿ ವಿಜೇತ ಗೋವಿಂದ ಭಟ್ ಸೇರಿದಂತೆ ಹಲವು ಕಲಾವಿದರು, ಯಕ್ಷಗಾನ ವಿದ್ವಾಂಸರು ಈ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದರು.

ಈಗಾಗಲೇ ಎರಡು ಬಾರಿ ಈ ಕಾರ್ಯಕ್ರಮ ರದ್ದು ಮಾಡಿದ್ದು, ಈಗ ಮೂರನೇ ಬಾರಿ ರದ್ದು ಮಾಡಿರುವುದು ಕಲಾವಿದರ ಆಕ್ರೋಶಕ್ಕೆ ಕಾರಣವಾಗಿದೆ. ಯಕ್ಷಗಾನ, ದೊಡ್ಡಾಟ, ಮೂಡಲಪಾಯ, ಗೊಂಬೆಯಾಟ, ವಿಚಾರ ಸಂಕಿರಣ, ಪ್ರಾತ್ಯಕ್ಷಿಕೆ, ಪ್ರರ್ದಶನ ಇತ್ಯಾದಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಎಲ್ಲ ಸಿದ್ಧತೆ ಮಾಡಲಾಗಿತ್ತು. ರದ್ದಾದ ಹಿನ್ನಲೆಯಲ್ಲಿ ಸಂಜೆ ಕಲಾಕ್ಷೇತ್ರದಲ್ಲಿ ಯಕ್ಷಗಾನ ಕಲಾವಿದರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಕೃಪೆ : publictv


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ