ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಸಂಪಾಜೆ ಶೀನಪ್ಪ ರೈಗಳಿಗೆ ಪ್ರಶಸ್ತಿ ಪ್ರದಾನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಗುರುವಾರ, ಆಗಸ್ಟ್ 1 , 2013
ಉಡುಪಿ , ಆಗಸ್ಟ್ 1 , 2013

ಸಂಪಾಜೆ ಶೀನಪ್ಪ ರೈಗಳಿಗೆ ಪ್ರಶಸ್ತಿ ಪ್ರದಾನ

ಉಡುಪಿ : ಪ್ರಸಂಗ ಪಠ್ಯ ಒಂದೇ ಆದರೂ ಕಲಾವಿದರ ಸಾಮರ್ಥಯದಿಂದಾಗಿ ಕಲಾಭಿವ್ಯಕ್ತಿ ಭಿನ್ನವಾಗಿರುವುದರಿಂದ ಒಮ್ಮೆ ವೀಕ್ಷಿಸಿದ ಆಖ್ಯಾನವನ್ನೇ ಇನ್ನೊಮ್ಮೆ ನೋಡಿದಾಗ ನೋಟಕನಿಗೆ ಅದು ಬೇರೆಯೇ ರಂಗಪ್ರಸ್ತುತಿಯಂತೆ ಕಾಣುವುದು ಯಕ್ಷಗಾನದ ವೈಶಿಷ್ಟ್ಯ. ಈ ಗುಣದಿಂದಲೇ ಯಕ್ಷಗಾನ ಶ್ರೇಷ್ಠ ಕಲೆ ಎಂದು ಮಾನ್ಯವಾಗಿದೆ ಎಂದು ಪರ್ಯಾಯ ಶ್ರೀ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ನುಡಿದರು.
ಸಂಪಾಜೆ ಶೀನಪ್ಪ ರೈ ಅವರಿಗೆ ಸರ್ಪಂಗಳ ಸುಬ್ರಹ್ಮಣ್ಯ ಭಟ್‌ ಪ್ರಶಸ್ತಿಯನ್ನು ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಪ್ರದಾನ


ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ ಅವರಿಗೆ ಸರ್ಪಂಗಳ ಸುಬ್ರಹ್ಮಣ್ಯ ಪ್ರಶಸ್ತಿ ಪ್ರದಾನ ಮಾಡಿ ಅವರು ಆಶೀರ್ವಚನ ನೀಡಿದರು.

ಶೀನಪ್ಪ ರೈ ಅವರು ಮಾತನಾಡಿ, ನನ್ನ 57 ವರ್ಷಗಳ ಕಲಾ ವ್ಯವಸಾಯದಿಂದ ತೃಪ್ತನಾಗಿದ್ದೇನೆ. ಪರ್ಯಾಯ ಶ್ರೀಗಳಿಂದ ಪ್ರಶಸ್ತಿ ಪಡೆದಿರುವುದು ಸ್ಮರಣೀಯ ಕ್ಷಣವಾಗಿದೆ ಎಂದು ಧನ್ಯತೆಯನ್ನು ವ್ಯಕ್ತಪಡಿಸಿದರು.

ಮುರಲಿ ಕಡೆಕಾರ್‌ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರವನ್ನು ನಾರಾಯಣ ಎಂ. ಹೆಗಡೆ ವಚಿಸಿದರು. ಡಾ| ನರೇಂದ್ರ ಶೆಣೈ ವಂದಿಸಿದರು. ನಳಿನಿ ಸುಬ್ರಹ್ಮಣ್ಯ ಭಟ್‌, ಡಾ| ಶೈಲಜಾ, ಜೈದೀಪ್‌ ಹಾಗೂ ರಮ್ಯಲಕ್ಷ್ಮೀ ಉಪಸ್ಥಿತರಿದ್ದರು.


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ