ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಕುರಿಯ ಗಣಪತಿ ಶಾಸ್ತ್ರಿಗೆ ಆಸ್ರಣ್ಣ ಪ್ರಶಸ್ತಿ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಶುಕ್ರವಾರ, ಸೆಪ್ಟೆ೦ಬರ್ 6 , 2013
ಸೆಪ್ಟೆ೦ಬರ್ , 6 , 2013

ಕುರಿಯ ಗಣಪತಿ ಶಾಸ್ತ್ರಿಗೆ ಆಸ್ರಣ್ಣ ಪ್ರಶಸ್ತಿ

ಮಂಗಳೂರು :
ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಶಿಷ್ಯವೃಂದದ ವತಿಯಿಂದ 2013ನೇ ಸಾಲಿನಲ್ಲಿ ನೀಡಲಾಗುವ 'ಕಟೀಲು ಗೋಪಾಲಕೃಷ್ಣ ಆಸ್ರಣ್ಣ' ಪ್ರಶಸ್ತಿಗೆ ಭಾಗವತ ಕುರಿಯ ಗಣಪತಿ ಶಾಸ್ತ್ರಿ ಆಯ್ಕೆಯಾಗಿದ್ದಾರೆ. 1958 ರಲ್ಲಿ ಮಂಜೇಶ್ವರದಲ್ಲಿ ಜನಿಸಿದ ಇವರು, ಸಂತ ಅಲೋಶಿಯಸ್‌ನಲ್ಲಿ ಪಿಯುಸಿ ಮತ್ತು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಬಿಎ ಪದವಿ ಮುಗಿಸಿದ್ದಾರೆ. ತಂದೆ ರಾಮಶಾಸ್ತ್ರಿ ಮತ್ತು ದೊಡ್ಡಪ್ಪ ವಿಠಲ ಶಾಸ್ತ್ರಿ ಯಕ್ಷಗಾನದ ಪುರಾಣ ಪುರುಷರು.

9ನೇ ತರಗತಿಯಲ್ಲಿ ಮಹಿಷಾಸುರ, ಮಾಗಧ, ಕಂಸ, ರಾವಣ ಪಾತ್ರಗಳಲ್ಲಿ ಕುಣಿದಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭ ಕಣ್ಣೂರಿನ ಸೆರೆಮನೆಯಲ್ಲಿ 6 ತಿಂಗಳು ಬಂಧನದಲ್ಲಿದ್ದರು. 1973 ರಲ್ಲಿ ಬಲಗಾಲಿನ ಪಾದಕ್ಕೆ ಕಲ್ಲೊತ್ತು ಶಸ್ತ್ರಚಿಕಿತ್ಸೆ ನಂತರ ನಾಟ್ಯಾಭಿನಯದ ವೇಷಗಾರಿಕೆಯನ್ನು ಬಿಟ್ಟು ಭಾಗವತರಾಗಿ ಹಾಡಿದರು. ಪತ್ನಿ ಶ್ಯಾಮಲೆ ಮತ್ತು ಐವರು ಮಕ್ಕಳಿದ್ದಾರೆ. ಸೆ.7ರಂದು ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸ್ಮಾರಕ ಸಭಾಂಗಣದಲ್ಲಿ ನಡೆಯುವ ಆಸ್ರಣ್ಣರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಬಂಗಾರದ ಪದಕದೊಂದಿಗೆ ಸನ್ಮಾನಿಸಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ