ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
`ಒಡ್ಡೋಲಗ` ಯಕ್ಷಗಾನದ ಸರಣಿ ಕಾರ್ಯಕ್ರಮಕ್ಕೆ ಚಾಲನೆ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಬುಧವಾರ, ನವ೦ಬರ್ 6 , 2013
ನವ೦ಬರ್ 6 , 2013

`ಒಡ್ಡೋಲಗ` ಯಕ್ಷಗಾನದ ಸರಣಿ ಕಾರ್ಯಕ್ರಮಕ್ಕೆ ಚಾಲನೆ

ಪಡುಬಿದ್ರಿ : ಯಕ್ಷಗಾನ ರಂಗ ವಸ್ತುನಿಷ್ಠ ಅಧ್ಯಯನ ನಡೆಸಿದ್ದಲ್ಲಿ ಮತ್ತೆ ರಂಗ ವೈಭವ ಮರುಕಳಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ರಾಘವ ನಂಬಿಯಾರ್ ಹೇಳಿದರು.

ಎಲ್ಲೂರು ಶ್ರೀ ಪಂಚಾಕ್ಷರಿ ಯಕ್ಷಗಾನ ಮಂಡಳಿಯ 40ನೇ ವರ್ಷದ ಸಂಭ್ರಮಾಚರಣೆಯ ಸಂದರ್ಭ 'ಒಡ್ಡೋಲಗ' ಯಕ್ಷಗಾನದ ಸರಣಿ ಕಾರ್ಯಕ್ರಮದ ಚಾಲನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಪಂಚಾಕ್ಷರಿ ಯಕ್ಷಗಾನ ಮಂಡಳಿ ವತಿಯಿಂದ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ರಾಘವ ನಂಬಿಯಾರ್ ಅವರನ್ನು ಅಭಿನಂದಿಸಲಾಯಿತು. ನಿವೃತ್ತ ಶಿಕ್ಷಕ ಯಕ್ಷಗಾನದ ಗುರು ವೈ. ವಾಸುದೇವ ರಾವ್ ದೀಪ ಬೆಳಗಿಸಿ ಒಡ್ಡೋಲೊಗ ಸರಣಿ ಕಾರ್ಯಕ್ರಮ ಉದ್ಘಾಟಿಸಿದರು.

ಕೆ. ಶ್ರೀನಿವಾಸ ಉಪಾಧ್ಯಾಯ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಬೇಲಾಡಿ ವಿಠಲ ಶೆಟ್ಟಿ, ಕೊಳ್ಯೂರು ರಾಮಚಂದ್ರ ರಾವ್, ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೈ. ಪ್ರಫುಲ್ಲ ಶೆಟ್ಟಿ, ಪ್ರಶಾಂತ್ ಶೆಟ್ಟಿ, ರಾಘವೇಂದ್ರ ರಾವ್, ಎಲ್ಲೂರು ಗ್ರಾಪಂ ಮಾಜಿ ಅಧ್ಯಕ್ಷ ವೈ. ಯಶವಂತ ಶೆಟ್ಟಿ, ಶರಾವತಿ ಯು.ಆರ್., ದೀಪಕ್ ವೈ. ಅತಿಥಿಗಳಾಗಿದ್ದರು.

ವೈ.ವಿ. ಸುಬ್ಬರಾವ್ ಸ್ವಾಗತಿಸಿದರು. ಜಾನಪದ ವಿದ್ವಾಂಸ ಕೆ.ಎಲ್. ಕುಂಡಂತಾಯ ಪ್ರಸ್ತಾವನೆ ಮಾಡಿದರು. ವೈ. ಗಣೇಶ್ ರಾವ್ ವಂದಿಸಿದರು. ವೈ. ಸುದರ್ಶನ್ ನಿರ್ವಹಿಸಿದರು.

ಕೃಪೆ : http://www.http://vijaykarnataka.indiatimes.com/


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ