ಯಕ್ಷಗಾನ ಉಳಿಸಿ ಬೆಳೆಸಲು ವಿವಿ ಯೋಜನೆ
ಲೇಖಕರು : ಸತೀಶ್ ನಾಯಕ್ , ಪಕಳಕು೦ಜ
ಭಾನುವಾರ, ನವ೦ಬರ್ 10 , 2013
|
ನವ೦ಬರ್ 10 , 2013
|
ಯಕ್ಷಗಾನ ಉಳಿಸಿ ಬೆಳೆಸಲು ವಿವಿ ಯೋಜನೆ
ಮಂಗಳೂರು :
ಯಕ್ಷಗಾನವನ್ನು ಭವಿಷ್ಯದ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಮಂಗಳೂರು ವಿವಿ ಯಕ್ಷಗಾನ ಅಧ್ಯಯನ ಕೇಂದ್ರ ನಾನಾ ಯೋಜನೆ ಹಮ್ಮಿಕೊಂಡಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಟಿ.ಸಿ. ಶಿವಶಂಕರಮೂರ್ತಿ ಹೇಳಿದ್ದಾರೆ.
ಮಂಗಳೂರು ವಿವಿ ಡಾ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಯಕ್ಷಾಂಗಣ ಮಂಗಳೂರು ವತಿಯಿಂದ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಭಾನುವಾರ ಆರಂಭಗೊಂಡ 'ಕನ್ನಡ ರಾಜ್ಯೋತ್ಸವ ಕಲಾಸಂಭ್ರಮ-ಯಕ್ಷಗಾನ ತಾಳಮದ್ದಳೆ ಸಪ್ತಾಹ 2013' ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕ ಅಭಿವೃದ್ಧಿ ಜತೆಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಮಂಗಳೂರು ವಿಶ್ವವಿದ್ಯಾಲಯ ಒತ್ತು ನೀಡುತ್ತಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರವೀಂದ್ರ ಕಲಾಭವನವನ್ನು ಉಚಿತವಾಗಿ ನೀಡಲಾಗುವುದು ಎಂದು ಅವರು ಹೇಳಿದರು. ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಅನಂತಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ಯಕ್ಷಗಾನ ಅಧ್ಯಯನ ಕೇಂದ್ರ ನಿರ್ದೇಶಕ ಡಾ. ಕೆ. ಚಿನ್ನಪ್ಪ ಗೌಡ ಆಶಯ ಭಾಷಣ ಮಾಡಿದರು. ಕುಲಸಚಿವ ಡಾ. ಪಿ.ಎಸ್. ಯಡಪಡಿತ್ತಾಯ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು.
ಯಕ್ಷಾಂಗಣ ಉಪಾಧ್ಯಕ್ಷ ಎ.ಶಿವಾನಂದ ಕರ್ಕೇರ, ವಾಸುದೇವ ಆರ್. ಕೊಟ್ಟಾರಿ, ಸದಸ್ಯರಾದ ಸುಧಾಕರ ರಾವ್ ಪೇಜಾವರ, ವಕ್ವಾಡಿ ಶೇಖರ ಶೆಟ್ಟಿ, ಎಂ.ಜೆ. ರಾವ್, ಕೆ. ಲಕ್ಷ್ಮಿನಾರಾಯಣ ರೈ ಹರೇಕಳ ಪಾಲ್ಗೊಂಡಿದ್ದರು. ಯಕ್ಷಾಂಗಣ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ನಿರೂಪಿಸಿದರು. ಬಳಿಕ ಶ್ರೀರಾಮಪಟ್ಟಾಭಿಷೇಕ ತಾಳಮದ್ದಳೆ ನಡೆಯಿತು.
ಕೃಪೆ : http://www.http://vijaykarnataka.indiatimes.com/
|
|
|