ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಯಕ್ಷಗಾನ ಹೆಸರಾಂತ ಕಲಾವಿದರಿಗೆ ಸನ್ಮಾನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಮ೦ಗಳವಾರ, ನವ೦ಬರ್ 26 , 2013
ನವ೦ಬರ್ 26 , 2013

ಯಕ್ಷಗಾನ ಹೆಸರಾಂತ ಕಲಾವಿದರಿಗೆ ಸನ್ಮಾನ

ಶಿರಸಿ : ಯಕ್ಷಗಾನ ಪ್ರದರ್ಶನ ನಡುವೆ ಹೆಸರಾಂತ ಕಲಾವಿದರಿಗೆ ಸನ್ಮಾನ ನಡೆಯಿತು. ಆ ಮೂಲಕ ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗೆ ಮೂವರು ಕಲಾವಿದರನ್ನು ಕಲಾಭಿಮಾನಿಗಳ ಕರತಾಡನದ ಮಧ್ಯೆ ಗೌರವಿಸಲಾಯಿತು. ಇಂಥದ್ದೊಂದು ಅಪರೂಪದ ಕಾರ್ಯಕ್ರಮ ಸಂಘಟಿತವಾಗಿದ್ದು ಇಲ್ಲಿಯ ಎಂಇಎಸ್ ವಾಣಿಜ್ಯ ಕಾಲೇಜಿನ ಸಿಲ್ವರ್ ಜ್ಯೂಬಿಲಿ ಹಾಲ್‌ನಲ್ಲಿ.

ಭಾನುವಾರ ಸಂಜೆ ಯಕ್ಷ ಚಾವಡಿ ಸಂಘಟನೆಯು ಆಯೋಜಿಸಿದ್ದ ಮಂಥರೆಯ ಮೋಡಿ ಹಾಗೂ ವಿಷವನ್ನು ಅಳಿಸಿದ ವಿಷಯೆ ಆಖ್ಯಾನ ಯಕ್ಷಗಾನ ಪ್ರದರ್ಶನ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ, ಹೆಸರಾಂತ ಮದಂಗವಾದಕ ಶಂಕರ ಭಾಗವತ ಯಲ್ಲಾಪುರ ಹಾಗೂ ಹಾಸ್ಯ ಕಲಾವಿದ ಶ್ರೀಧರ ಹೆಗಡೆ ಚಪ್ಪರಮನೆ ಅವರನ್ನು ಸನ್ಮಾನಿಸಲಾಯಿತು.

ಸಹಕಾರಿ ಪ್ರಮುಖರಾದ ಎನ್.ಪಿ.ಗಾಂವಕರ, ಎಸ್.ಪಿ.ಶೆಟ್ಟಿ, ಎಂಇಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ, ಪತ್ರಕರ್ತ ಅಶೋಕ ಹಾಸ್ಯಗಾರ, ಯಕ್ಷ ಚಾವಡಿಯ ಎಸ್.ಎಸ್.ಭಟ್ಟ ಕಲಾವಿದರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಎನ್.ಪಿ.ಗಾಂವಕರ ಮಾತನಾಡಿ, ಯಕ್ಷಗಾನದಂತ ಕಲೆಯ ಉಳಿವಿಗೆ ಎಲ್ಲರ ಪ್ರೋತ್ಸಾಹ ಅಗತ್ಯವಿದೆ. ಇಂಥ ಹಿರಿಯ ಕಲಾವಿದರಿಗೆ ಸನ್ಮಾನಿಸುವ ಮೂಲಕ ಯಕ್ಷ ಚಾವಡಿ ಉತ್ತಮ ಕಾರ್ಯ ಮಾಡಿದೆ ಎಂದು ಶ್ಲಾಘಿಸಿದರು. ಗಿರಿಧರ ಕಬ್ನಳ್ಳಿ ನಿರೂಪಿಸಿದರು.

ಕೃಪೆ : http://vijaykarnataka.com


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ