ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಕಲಾವಿದರು ಯಕ್ಷಗಾನ ಕೃತಿ ಓದಬೇಕು: ಪ್ರೊ.ಸಾಮಗ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಗುರುವಾರ, ಡಿಸೆ೦ಬರ್ 19 , 2013
ಡಿಸೆ೦ಬರ್ 19, 2013

ಕಲಾವಿದರು ಯಕ್ಷಗಾನ ಕೃತಿ ಓದಬೇಕು: ಪ್ರೊ.ಸಾಮಗ

ಮಂಗಳೂರು : ಯಕ್ಷಗಾನದ ಸಮಗ್ರ ನೋಟವನ್ನು ಒಳಗೊಂಡಿರುವ ಯಕ್ಷಗಂಗೋತ್ರಿ ಕೃತಿಯನ್ನು ಕಲಾವಿದರು ಓದಬೇಕಾದ ಅಗತ್ಯವಿದೆ ಎಂದು ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗ ಹೇಳಿದ್ದಾರೆ. ಸೋಮೇಶ್ವರ ಕಲಾಗಂಗೋತ್ರಿ ಯಕ್ಷಗಾನ ಕೇಂದ್ರದ 40ನೇ ವರ್ಧಂತ್ಯುತ್ಸವ ಸಲುವಾಗಿ ಬುಧವಾರ ನಗರದ ಪುರಭವನದಲ್ಲಿ 'ಯಕ್ಷಗಂಗೋತ್ರಿ' ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.

ಈ ಕೃತಿಯಲ್ಲಿ ಯಕ್ಷಗಾನಕ್ಕೆ ಸಂಬಂಧಿಸಿದ 32 ಲೇಖನಗಳಿವೆ. ಯಕ್ಷಗಾನ ಬೆಳವಣಿಗೆಯ ವಿಸ್ತಾರದ ಹಿಂದೆ ಹವ್ಯಾಸಿ ಯಕ್ಷಗಾನ ವರ್ಗ ಇದೆ. ಅವರೂ ಈ ಕೃತಿಯನ್ನು ಓದಬೇಕು. ಯಕ್ಷಗಾನ ಇನ್ನಷ್ಟು ಬೆಳೆಯಬೇಕಾದರೆ ಸೀಮೋಲ್ಲಂಘನ ಆಗಬೇಕು ಎಂದು ಆಶಿಸಿದರು. ಇದೇ ಸಂದರ್ಭ ಹಿರಿಯ ಹಾಸ್ಯಗಾರ ಮಿಜಾರು ಅಣ್ಣಪ್ಪ ಮತ್ತು ಹಿರಿಯ ಸ್ತ್ರೀಪಾತ್ರ ಕಲಾವಿದ ಡಾ.ಕೋಳ್ಯೂರು ರಾಮಚಂದ್ರ ರಾವ್‌ರನ್ನು ಸನ್ಮಾನಿಸಲಾಯಿತು. ಮಂಗಳೂರು ವಿಶ್ವವಿದ್ಯಾಲಯ ಯಕ್ಷಗಾನ ಕೇಂದ್ರ ನಿರ್ದೇಶಕ ಪ್ರೊ.ಕೆ.ಚಿನ್ನಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಶುಭಾಶಂಸನೆ ಮಾಡಿದರು. ಕೇಂದ್ರದ ಅಧ್ಯಕ್ಷ ಪ್ರೊ.ಅಮೃತ ಸೋಮೇಶ್ವರ, ಕಾರ್ಯದರ್ಶಿ ಕೆ.ಸದಾಶಿವ, ಕೋಶಾಧಿಕಾರಿ ಬಾಬು ಜಿ.ಕೋಟೆಕಾರ್ ಹಾಜರಿದ್ದರು.

ಕೃಪೆ : http://kannadaprabha.com

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ