ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಐರೋಡಿಗೆ ಉಪಾಧ್ಯಾಯ ಪ್ರಶಸ್ತಿ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಸೋಮವಾರ, ಡಿಸೆ೦ಬರ್ 30 , 2013
ಡಿಸೆ೦ಬರ್ 30, 2013

ಐರೋಡಿಗೆ ಉಪಾಧ್ಯಾಯ ಪ್ರಶಸ್ತಿ

ಮಂಗಳೂರು : ಹನ್ನೆರಡನೇ ವಯಸ್ಸಿಗೆ ಯಕ್ಷಗಾನರಂಗಕ್ಕೆ ಪಾದಾರ್ಪಣೆ ಮಾಡಿ ಯಕ್ಷಗಾನದ ಸವ್ಯಸಾಚಿ ಎನಿಸಿದ ಐರೋಡಿ ಗೋವಿಂದಪ್ಪ ಅವರನ್ನು ಈ ವರ್ಷದ ಕೆ.ಎಸ್‌. ಉಪಾಧ್ಯಾಯ ಯಕ್ಷಗಾನ ಕಲಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಯಕ್ಷಗಾನ ಕಲೆಗಾಗಿ ಶ್ರಮಿಸಿದ ಹಿರಿಯ ಪತ್ರಕರ್ತ ಉಪಾಧ್ಯಾಯರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ.

ಗೋಳಿಗರಡಿ ಮೇಳದಿಂದ ಆರಂಭವಾಗಿ ಪೆರ್ಡೂರು, ಸೋಮನಾಥೇಶ್ವರ, ಸಾಲಿಗ್ರಾಮ, ಕಣಿಪುರ, ಅಮೃತೇಶ್ವರಿ ಮೇಳಗಳ ಸತತ 40 ವರ್ಷಗಳಷ್ಟು ಕಾಲ ತಿರುಗಾಟ ಮಾಡಿದ, 50 ವರ್ಷಕ್ಕೂ ಮಿಕ್ಕಿ ಯಕ್ಷಗಾನ ಕಲಾಸೇವೆ ನಡೆಸಿದ ಐರೋಡಿ ಗೋವಿಂದಪ್ಪ ತೆಂಕು ಮತ್ತು ಬಡಗುತಿಟ್ಟುಗಳ ಪ್ರಾವೀಣ್ಯ ಹೊಂದಿದವರಾಗಿದ್ದು, ಕುಣಿತ, ಅರ್ಥಗಾರಿಕೆ ಜತೆಯಲ್ಲಿ ಭಾಗವತಿಕೆ, ಚಂಡೆ, ಮದ್ದಳೆ, ವೇಷಭೂಷಣಗಳಲ್ಲೂ ಪಾಂಡಿತ್ಯ ಸಾಧಿಸಿದವರು.

ಉಪಾಧ್ಯಾಯ ಟ್ರಸ್ಟ್‌ ಅಧ್ಯಕ್ಷೆ ಡಾ| ಲೀಲಾ ಉಪಾಧ್ಯಾಯ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಭೆಯಲ್ಲಿ ಸುಬ್ರಾಯ ಕಾರಂತ, ಎನ್‌.ಎಸ್‌. ಚಕ್ಕೇರ, ರಘುರಾಮ ರಾವ್‌, ಕೆ. ರಮೇಶ ರಾವ್‌, ಎ.ಎಸ್‌.ಎನ್‌. ಹೆಬ್ಟಾರ್‌ ಉಪಸ್ಥಿತರಿದ್ದರು. ಪ್ರಶಸ್ತಿ 15,000 ರೂ. ನಗದನ್ನು ಹೊಂದಿದೆ.

ಕೃಪೆ : http://www.udayavani.com

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ