ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಕಲಾಸಕ್ತಿಯಿಂದ ಸಂತೃಪ್ತ ಜೀವನ: ಬನ್ನಂಜೆ ಸಂಜೀವ ಸುವರ್ಣ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಭಾನುವಾರ, ಜನವರಿ 19 , 2014
ಜನವರಿ 18, 2014

ಕಲಾಸಕ್ತಿಯಿಂದ ಸಂತೃಪ್ತ ಜೀವನ: ಬನ್ನಂಜೆ ಸಂಜೀವ ಸುವರ್ಣ

ಉಡುಪಿ : ಬದುಕು ಹಸನಾಗಲು ಕಲಾಸಕ್ತಿ ಅತ್ಯಗತ್ಯ, ಕಲೆಯಲ್ಲಿ ಆಸಕ್ತರು ಸಂತೃಪ್ತ ಜೀವನ ನಡೆಸುತ್ತಾರೆ ಎಂದು ಉಡುಪಿ ಯಕ್ಷಗಾನ ಕೇಂದ್ರದ ಗುರು ಬನ್ನಂಜೆ ಸಂಜೀವ ಸುವರ್ಣ ಹೇಳಿದರು. ಅವರು ಇಲ್ಲಿನ ಪೂರ್ಣಪ್ರಜ್ಞ ಕಾಲೇಜಿನ ಸಾಂಸ್ಕೃತಿಕ ಸಂಘ ಏರ್ಪಡಿಸಿದ್ದ ಆಳ್ವಾಸ್ ನುಡಿಸಿರಿಯ ಬಡಗುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಕಾಲೇಜಿನ ವಿದ್ಯಾರ್ಥಿ ಕಲಾವಿದರನ್ನು ಅಭಿನಂದಿಸಿ ಮಾತನಾಡಿದರು.

ಯಕ್ಷಗಾನ ವಿದ್ಯಾರ್ಥಿಗಳ ಪರವಾಗಿ ಪೂಜಿತಾ ತಮ್ಮ ಅನುಭವಗಳನ್ನು ಹಂಚಿಕೊಂಡು ಇಂತಹ ಸ್ಪರ್ಧೆ ಏರ್ಪಸಿದ್ದ ಆಳ್ವಾಸ್ ನುಡಿಸಿರಿಗೆ ಕೃತಜ್ಞತೆ ಸಲ್ಲಿಸಿದರು. ಉಪಸ್ಥಿತರಿದ್ದ ಹಿರಿಯ ವಿಮರ್ಶಕ ಮುರಳೀಧರ ಉಪಾಧ್ಯ ಅವರು ವಿದ್ಯಾರ್ಥಿಗಳು ಯಕ್ಷಗಾನದಂತಹ ಕಲಾಮಾಧ್ಯಮದತ್ತ ಒಲವನ್ನು ಬೆಳೆಸಿಕೊಳ್ಳುವಂತೆ ವಿನಂತಿಸಿದರು.

ಕಾಲೇಜಿನ ಸಾಂಸ್ಕಣತಿಕ ಸಂಘದ ಪ್ರಾಧ್ಯಾಪಕ ಸಲಹೆಗಾರ ಡಾ. ಶ್ರೀಕಾಂತತ್ಸಿದ್ದಾಪುರ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕರಿಸುತ್ತಿರುವ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು. ಯಕ್ಷಗಾನ ಪ್ರಸಂಗ ನಿರ್ದೇಶನದಲ್ಲಿ ಸಹಕರಿಸಿದ ಗುರುಗಳಾದ ಸಂಜೀವ ಸುವರ್ಣರನ್ನು, ಕರ್ನಾಟಕ ಸಂಗೀತ ಕ್ಷೇತ್ರದಲ್ಲಿ ರಾಜ್ಯದ ಗಮನ ಸೆಳೆದ ಕಾಲೇಜಿನ ವಿದ್ಯಾರ್ಥಿನಿಯರಾದ ಗಾಗರ್ದಿ ಶಬರಾಯ ಋುತ್ತು ಶರಧಿ ಪಾಟೀಲ ಅವರನ್ನು ಕಾಲೇಜಿನ ಪರವಾಗಿ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಸದಾಶಿವ ರಾವ್ ಅಭಿನಂದಿಸಿದರು. ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ಶಾಸ್ತ್ರಿ ಸ್ವಾಗತಿಸಿ, ರಶ್ಮಿಶ್ರೀ ವಂದಿಸಿದರು.

ಕೃಪೆ : http://kannadaprabha.com

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ