ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿ ಪ್ರದಾನ
ಲೇಖಕರು : ಸತೀಶ್ ನಾಯಕ್ , ಪಕಳಕು೦ಜ
ಸೋಮವಾರ, ಜನವರಿ 27 , 2014
|
ಜನವರಿ 27, 2014
|
ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿ ಪ್ರದಾನ
ಉಡುಪಿ :
ಕಳೆದ 63 ವರ್ಷಗಳಿಂದ ಕಲಾ ಸೇವೆ ನಡೆಸುತ್ತಿರುವ ಗುಂಡಿಬೈಲಿನ ಯಕ್ಷಗಾನ ಕಲಾಕ್ಷೇತ್ರಕ್ಕೆ ಅಂಬಲಪಾಡಿ ದೇವಾಲಯ ಕೊಡಮಾಡುವ ನಿಡಂಬೂರು ಬೀಡುಬಲ್ಲಾಳ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶನಿವಾರ ಅಂಬಲಪಾಡಿ ದೇವಾಲಯದ ವಠಾರದಲ್ಲಿ ನಡೆದ ಅಂಬಲಪಾಡಿ ಶ್ರೀಲಕ್ಷ್ಮೀ ಜನಾರ್ಧನ ಯಕ್ಷಗಾನ ಕಲಾಮಂಡಳಿಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಆನೆಗುಡ್ಡೆ ಶ್ರೀ ಸಿದ್ಧಿವಿನಾಯಕ ದೇವಾಲಯದ ಧರ್ಮದರ್ಶಿ ಸೂರ್ಯನಾರಾಯಣ ಉಪಾಧ್ಯರು ಈ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಂಬಲಪಾಡಿ ದೇವಳದ ಧರ್ಮದರ್ಶಿಯಾಗಿದ್ದ ದಿ.ಅಣ್ಣಾಜಿ ಬಲ್ಲಾಳರು ತಮ್ಮ ಸಮಾಜಮುಖಿ ಕಾರ್ಯಗಳಿಂದಾಗಿ ದೇವಾಲಯಗಳ ಧರ್ಮದರ್ಶಿಗಳಿಗೆ ಆದರ್ಶರಾಗಿದ್ದಾರೆ. ದೇವಾಲಯದಲ್ಲಿ ಭಕ್ತರಿಂದ ಸಂಗ್ರಹವಾದ ಕಾಣಿಕೆಯ ಒಂದು ಭಾಗವನ್ನು ಧಾರ್ಮಿಕ, ಸಾಂಸ್ಕೃತಿ ಕ ಕಾರ್ಯಕ್ರಮಗಳಲ್ಲಿ ತೊಡಗಿಸಿ ಇತರರಿಗೆ ಮಾದರಿಯಾಗಿದ್ದಾರೆ. ತಮ್ಮ ತಂದೆಯ ಹೆಸರಿನಲ್ಲಿ ಡಾ. ನಿ. ಬೀ. ವಿಜಯ ಬಲ್ಲಾಳರು ಪ್ರಶಸ್ತಿಯನ್ನು ಆರಂಭಿಸಿದ್ದು ಶ್ಲಾಘನೀಯ ಎಂದರು.
ಪ್ರಶಸ್ತಿಯನ್ನು ಕಲಾಕ್ಷೇತ್ರದ ಅಧ್ಯಕ್ಷ ಬಾಬು ಗೌಡ ಸ್ವೀಕರಿಸಿದರು. ಶಾಸಕ ಪ್ರಮೋದ್ ಮಧ್ವರಾಜ್, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಇಂದ್ರಾಳಿ ಜಯಕರ ಶೆಟ್ಟಿ , ಕಲಾಕ್ಷೇತ್ರದ ಕಾರ್ಯದರ್ಶಿ ಕೇಶವ ಮೂರ್ತಿ, ಅಂಬಲಪಾಡಿ ಮಂಡಳಿಯ ಸದಸ್ಯ ಎ. ರಾಘವೇಂದ್ರ ಉಪಾಧ್ಯಾಯರು ಉಪಸ್ಥಿತರಿದ್ದರು.
ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳ್ ಸ್ವಾಗತಿಸಿದರು. ವಸಂತ ಪಾಲನ್ ಸನ್ಮಾನ ಪತ್ರ ವಾಚಿಸಿದರು. ಮಂಡಳಿಯ ಅಧ್ಯಕ್ಷ ಮುರಲಿ ಕಡೆಕಾರ್ ವಂದಿಸಿ ನಾರಾಯಣ ಎಂ ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಪ್ರಶಸ್ತಿ 10 ಸಾವಿರ ರೂ. ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿದೆ. ನಂತರ ಮಂಡಳಿಯ ಬಾಲ ಕಲಾವಿದರಿಂದ 'ಧ್ರುವ ಚರಿತ್ರೆ' ಮತ್ತು 'ವೀರ ವಷಸೇನ ' ಎಂಬ ಯಕ್ಷಗಾನ ಕಲಾವಿದ ಕೆ.ಜೆ ಕಷ್ಣ ನಿರ್ದೇಶನದಲ್ಲಿ ಪ್ರದರ್ಶನಗೊಂಡಿತು.
ಕೃಪೆ :
http://www.vijaykarnataka.com
|
|
|