ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ತಾಳಮದ್ದಳೆ ಸಪ್ತಾಹ, ಹರಿಕಥಾ ಭದ್ರಗಿರಿ ಪುಣ್ಯಸ್ಮರಣೆ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಗುರುವಾರ, ನವ೦ಬರ್ 27 , 2014
ನವ೦ಬರ್ 25, 2014

ತಾಳಮದ್ದಳೆ ಸಪ್ತಾಹ, ಹರಿಕಥಾ ಭದ್ರಗಿರಿ ಪುಣ್ಯಸ್ಮರಣೆ

ಬೆಳ್ತಂಗಡಿ : ಯಕ್ಷಗಾನದ ಮೂಲಕ ಪುರಾಣದ ತಿಳಿವಳಿಕೆ ಜತೆಗೆ ಸಾಮಾಜಿಕ ಬದ್ಧತೆಯೂ ದೊರೆಯುತ್ತದೆ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಯು. ವಿಜಯ ರಾಘವ ಪಡ್ವೆಟ್ನಾಯ ಹೇಳಿದರು.

ಉಜಿರೆ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಮಂಟಪದಲ್ಲಿ ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನ ಮತ್ತು ನೆಡ್ಳೆ ನರಸಿಂಹ ಭಟ್ಟ ಯಕ್ಷಗಾನ ಪ್ರತಿಷ್ಠಾನ ನೇತೃತ್ವದಲ್ಲಿ ಕಲೆ- ಕಲಾವಿದ- ಪೋಷಕ ಕೆ.ವಿ. ಮುಚ್ಚಿ ನ್ನಾಯ ನೆನಪಿನ ಯಕ್ಷಗಾನ ತಾಳಮದ್ದಳೆ ಸಪ್ತಾಹ, ಹರಿಕಥಾ ಭದ್ರಗಿರಿ ಪುಣ್ಯಸ್ಮರಣೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನದ ಮೂಲಕ ನೈತಿಕ ಜವಾಬ್ದಾರಿ ಹೆಚ್ಚಿಸುವ ಸಂದೇಶಗಳು ಲಭಿಸುತ್ತವೆ ಎಂದರು.

ಹಿರಿಯ ಕಲಾವಿದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ, ಕೆ. ಶ್ರೀಶ ಮುಚ್ಚಿನ್ನಾಯ, ಗೋಪಾಲ ರಾವ್ ಉಪಸ್ಥಿತರಿದ್ದರು. ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ್ ಭಟ್ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದ ಸಂಯೋಜಕ ಡಾ. ಶ್ರುತಕೀರ್ತಿರಾಜ್ ಕಾರ್ಯಕ್ರಮ ನಿರ್ವಹಿಸಿದರು.

ತಾಳಮದ್ದಳೆ ಸಪ್ತಾಹದ ಅಂಗವಾಗಿ ಮೊದಲ ದಿನ ಗಿರೀಶ್ ರೈ ಕಕ್ಯಪದವು ಭಾಗವತಿಕೆ, ಪದ್ಮನಾಭ ಉಪಾಧ್ಯಾಯ ಮದ್ದಳೆ, ದೇವಾನಂದ ಭಟ್ ಚೆಂಡೆ, ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ, ಶಂಭು ಶರ್ಮ ವಿಟ್ಲ, ಶ್ರೀಧರ ಡಿ.ಎಸ್. ಕಿನ್ನಿಗೋಳಿ, ಶ್ರೀರಮಣ ಆಚಾರ್ ಕಾರ್ಕಳ, ಸುರೇಶ್ ಶೆಟ್ಟಿ ಪುಂಜಾಲಕಟ್ಟೆ ಮುಮ್ಮೇಳದಲ್ಲಿ 'ಅತಿಕಾಯ ಮೋಕ್ಷ' ಪ್ರಸಂಗ ನಡೆಯಿತು.



ಕೃಪೆ : http://www.vijaykarnataka.com


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ