ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಯಕ್ಷಗಾನದಲ್ಲಿಯೂ ಬದಲಾವಣೆ ಅಗತ್ಯ : ಜಯಪ್ರಕಾಶ್ ಹೆಗ್ಡೆ

ಲೇಖಕರು : ಪ್ರಜಾವಾಣಿ
ಮ೦ಗಳವಾರ, ನವ೦ಬರ್ 17 , 2015
ನವ೦ಬರ್ 17, 2015

ಯಕ್ಷಗಾನದಲ್ಲಿಯೂ ಬದಲಾವಣೆ ಅಗತ್ಯ : ಜಯಪ್ರಕಾಶ್ ಹೆಗ್ಡೆ

ಬ್ರಹ್ಮಾವರ : ಯಕ್ಷಗಾನ ನೋಡುವ ಆಸಕ್ತಿ ಎಲ್ಲರಿಗೂ ಇದೆ. ಆದ್ದರಿಂದ ಕಾಲ ಮಿತಿಯನ್ನು ಮಾಡಿಕೊಂಡು ಕಲಾವಿ ದನ ಮನಸ್ಸಿಗೆ ನೋವಾಗದಂತೆ ಬದಲಾ ವಣೆಯನ್ನು ಮಾಡಿಕೊಳ್ಳುವುದು ಇಂದಿನ ಅನಿವಾರ್ಯ ಎಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿದರು.

ಸಾಲಿಗ್ರಾಮ ಗುಂಡ್ಮಿಯ ಕಲಾ ಕೇಂದ್ರದ ಸದಾನಂದ ರಂಗಮಂಟಪ ದಲ್ಲಿ ಭಾನುವಾರ ದಿ.ಟಿ.ಎ.ಪೈ ಅವರ ನೆನಪಿನಲ್ಲಿ ಮಣೂರು ಗೀತಾನಂದ ಟ್ರಸ್ಟ್, ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್, ಸಾಲಿಗ್ರಾಮದ ಸ್ವಾಸ್ಥ್ಯ ಹೆಲ್ತ್ ಕೇರ್ ಮತ್ತು ರಿಸರ್ಚ್ ಸೆಂಟರ್ ಮತ್ತು ರಮ್ಯ ಅಫ್‌ಸೆಟ್ ಪ್ರಿಂಟರ್ಸ್‌ ಸಹಯೋಗದೊಂದಿಗೆ ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾಕೇಂದ್ರ 15 ವರ್ಷಗಳಿಂದ ನಡೆಸಿಕೊಂಡು ಬಂದ ರಾಜ್ಯ ಮಟ್ಟದ ಹೂವಿನಕೋಲು ಸ್ಪರ್ಧೆಯ ಸಮಾರೋಪ ಸಮಾರಂಭ ದಲ್ಲಿ ಅವರು ಮಾತನಾಡಿದರು.

ಯಕ್ಷಗಾನದಿಂದ ಭಾಷೆಯ ಮೇಲಿ ನ ಹಿಡಿತ, ಪೌರಾಣಿಕ ಕಥೆಗಳ ಬಗ್ಗೆ ಜನರಿಗೆ ಮಾಹಿತಿ ಸಿಗುತ್ತಿದೆ. ಇಂದು ಕಲಾವಿದರ ಪರಿಸ್ಥಿತಿ ಸುಧಾರಿಸಿದೆ. ಕಲೆಯ ಮೇಲೆ ಅವಲಂಬಿತನಾಗಿ ರುವವನಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ ಎಂದು ಅವರು ಹೇಳಿದರು.

ಯಕ್ಷಗಾನ ಕಲಾಕೇಂದ್ರದ ಗೌರವಾ ಧ್ಯಕ್ಷ ಆನಂದ್ ಸಿ ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಯಕ್ಷಗಾನ ಚಿಂತಕ ಹಾಗೂ ವಿಮರ್ಶಕ ರಾಘವ ನಂಬಿಯಾರ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಲಾಕೇಂದ್ರದ ವೈಕುಂಠ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ತೀರ್ಪುಗಾರರಾಗಿ ಬಂದಿದ್ದ ಐರೋಡಿ ಗೋವಿಂದಪ್ಪ, ಐರೋಡಿ ನರಸಿಂಹ ಹೆಬ್ಬಾರ್ ಮತ್ತು ಶಿರೂರು ಚಿತ್ತು ಪೂಜಾರಿ ಅವರನ್ನು ಗೌರವಿಸಲಾಯಿತು. ಕಲಾಕೇಂದ್ರದ ಅಧ್ಯಕ್ಷ ಎ.ಎಸ್.ಎನ್ ಹೆಬ್ಬಾರ್ ಪ್ರಾಸ್ತಾವಿ ಕವಾಗಿ ಮಾತನಾಡಿ ಸ್ವಾಗತಿಸಿದರು.

ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್ ವಂದಿಸಿದರು. ರಾಮಚಂದ್ರ ಐತಾಳ್‌ ಗುಂಡ್ಮಿ ಕಾರ್ಯಕ್ರಮ ನಿರೂಪಿಸಿದರು. ಅಶೋಕ್ ಆಚಾರ್ ಸಾಯಿಬ್ರಕಟ್ಟೆ, ಸೀತಾರಾಮ ಸೋಮಯಾಜಿ ಸಹಕರಿಸಿದರು.

ಫಲಿತಾಂಶ: ಶಾಲಾ ವಿಭಾಗದ ಒಟ್ಟು 7 ತಂಡಗಳ ಪೈಕಿ ಬ್ರಹ್ಮಾವರದ ಸರ್ಕಾರಿ ಪ್ರೌಢಶಾಲೆ, ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆ ಮತ್ತು ಮಣೂರಿನ ರಾಮಪ್ರಸಾದಿತ ಹಿರಿಯ ಪ್ರಾಥಮಿಕ ಶಾಲೆಯ ತಂಡಗಳು ಪ್ರಶಸ್ತಿ ಪಡೆದರೆ, ಸಂಘ ಸಂಸ್ಥೆ ವಿಭಾಗ ಮಟ್ಟದಲ್ಲಿ ಕಾರ್ಕಡ ಯಕ್ಷಮಿತ್ರರು, ಕೋಟದ ಕಲಾಪೀಠ ಮತ್ತು ಉದಯಕುಮಾರ್ ಹೊಸಾಳದ ತಂಡಗಳು ಪ್ರಶಸ್ತಿ ಪಡೆದವು.



ಕೃಪೆ : prajavani


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ