ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಕಲಾ ಭಾಂದವ್ಯ ಪ್ರಶಸ್ತಿಯಿಂದ ಕಲಾವಿದ-ಯಜಮಾನರ ಭಾಂದವ್ಯ ವೃದ್ದಿ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಗುರುವಾರ, ನವ೦ಬರ್ 19 , 2015
ನವ೦ಬರ್ 19, 2015

ಕಲಾ ಭಾಂದವ್ಯ ಪ್ರಶಸ್ತಿಯಿಂದ ಕಲಾವಿದ-ಯಜಮಾನರ ಭಾಂದವ್ಯ ವೃದ್ದಿ

ಶಿರಿಯಾರ : ಕಲಾವಿದರೊಬ್ಬರ ಹೆಸರಿನಲ್ಲಿ ಮೇಳದ ಯಜಮಾನರು ಪ್ರತೀವರ್ಷ ಪ್ರಶಸ್ತಿ ನೀಡುತ್ತಿರುವುದರಿಂದ ಕಲಾವಿದ ಯಜಮಾನರ ನಡುವಿನ ಭಾಂದವ್ಯ ವೃದ್ದಿಯಾಗುತ್ತದೆ. ಸಾಲಿಗ್ರಾಮ ಮೇಳದವರು ಪ್ರತೀವರ್ಷ ಮೇಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ರಂಗಸ್ಥಳದಲ್ಲೇ ಮರಣಪಟ್ಟ ಕಲಾ ತಪಸ್ವಿ ಶಿರಿಯಾರ ಮಂಜುನಾಯ್ಕರ ಹೆಸರಿನಲ್ಲಿ ಕಲಾವಿದರೊಬ್ಬರಿಗೆ ಪ್ರಶಸ್ತಿ ನೀಡುತ್ತಿರುವುದು ಇತರರಿಗೆ ಮಾದರಿ ಎಂದು ಮಣಿಪಾಲ ಎಂ.ಐ.ಟಿ ಪ್ರಾಧ್ಯಾಪಕ ಎಸ್.ವಿ.ಉದಯ ಕುಮಾರ ಶೆಟ್ಟರು ಹೇಳಿದರು.

ಅವರು ಶಿರಿಯಾರದಲ್ಲಿ ಸಾಲಿಗ್ರಾಮ ಮೇಳದ ಪ್ರಥಮ ಡೇರೆ ಆಟದಲ್ಲಿ ಶಿರಿಯಾರ ಮಂಜುನಾಯ್ಕರ ಹೆಸರಿನಲ್ಲಿ ನೀಡುವ ಕಲಾಭಾಂದವ್ಯ ಪ್ರಶಸ್ತಿಯನ್ನು ಮಾರಣಕಟ್ಟೆ ಮೇಳದ ಹಿರಿಯ ಕಲಾವಿದ ಐರುಬೈಲು ಆನಂದ ಶೆಟ್ಟರಿಗೆ ಪ್ರದಾನ ಮಾಡಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪ್ರಸಂಗಕರ್ತ ಬಸವರಾಜ ಶೆಟ್ಟಿಗಾರ್ ಮತ್ತು ಗಣೇಶಪ್ರಸಾದ್ ಅರಾಟೆಯವರು ಆಗಮಿಸಿದ್ದರು. ಶಿರಿಯಾರ ಮಂಜುನಾಯ್ಕರ ಪುತ್ರ ರಮೇಶಮಂಜು ಸ್ವಾಗತಿಸಿ ಧನ್ಯವಾದ ನೀಡಿದರು. ಶ್ರೀನಿವಾಸ ಹಿರಿಯಡ್ಕ ಸನ್ಮಾನಪತ್ರ ವಾಚಿಸಿದರು. ಮೇಳದ ವ್ಯಸ್ಥಾಪಕ ಪಿ.ಕಿಶನ್ ಹೆಗ್ಡೆ ಉಪಸ್ಥಿತರಿದ್ದರು.




Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ